ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಅವರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರಂತೆ.
ಚಾಮರಾಜನಗರದಲ್ಲಿ ವಿವಿಧ ಕಾರ್ಯಕ್ರಮಗಳ ನಿಮಿತ್ತ ಶನಿವಾರ ಹೋದ ವೇಳೆ, ಮಹಿಳೆಯೊಬ್ಬಳು ತಮಗೆ ನಿವೇಶನ ಹಂಚಿಕೆಯಾಗಿಲ್ಲ. ದಯವಿಟ್ಟು ನಿವೇಶನ ಹಂಚಿಕೆ ಮಾಡಿಕೊಡಿ ಎಂದು ಬೇಡಿಕೊಳ್ಳುತ್ತಿದ್ದಾಗ, ಸಚಿವರು ಮಹಿಳೆ ಕೆನ್ನೆಗೆ ಹೊಡೆದಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಸಚಿವ ವಿ.ಸೋಮಣ್ಣ ವರ್ತನೆಗೆ ನಾಡಿನ ಜನತೆ ಸೇರಿದಂತೆ ವಿಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದರು. ನಂತರ ಅವರು ಕ್ಷಮೆ ಕೇಳಿದರು. ಪರಿಸ್ಥಿತಿಯ ಗಂಭೀರತೆ ಹಾಗೂ ಮುಂಬರುವ ಚುನಾವಣೆಯ ದೃಷ್ಟಿಯಿಂದ ವಿ.ಸೋಮಣ್ಣ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.