ಪ್ರಜಾಸ್ತ್ರ ಸುದ್ದಿ
ಮೈಸೂರು: ವಿಧಾನಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಪಾಳೆಯದಲ್ಲಿ ಈಗಾಗ್ಲೇ ಮುಖ್ಯಮಂತ್ರಿ ಯಾರು ಅನ್ನೋದರ ಚರ್ಚೆ ಬಹಿರಂಗವಾಗಿಯೇ ನಡೆಯುತ್ತಿದೆ. ಸಂಬಂಧ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಯಾರಾಗಬೇಕು ಅನ್ನೋದು ಹೈಕಮಾಂಡ್ ನಿರ್ಧಾರ. ಅದನ್ನು ಮೈಸೂರಿನಲ್ಲಿ, ಬೆಂಗಳೂರಿನಲ್ಲಿ, ಕಲಬುರಗಿಯಲ್ಲಿ ತೀರ್ಮಾನ ಆಗೋದಲ್ಲವೆಂದು ಹೇಳಿದ್ದಾರೆ.
ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತದೆ. ನಮ್ಮದು ಯಾವಾಗಲೂ ಸಾಮೂಹಿಕ ನಾಯಕತ್ವ. ಈ ಬಾರಿ, ಆ ಬಾರಿ ಅನ್ನೋದು ಏನಿಲ್ಲ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶ ಎಂದರು. ನಿವೆಲ್ಲ ಅವಕಾಶ ಕೊಟ್ಟರೆ ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.