ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಾಹಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ, ಎಸ್.ಟಿ ಸೋಮಶೇಖರ ಹಾಗೂ ಐಎಎಸ್ ಅಧಿಕಾರಿ ಪ್ರಕಾಶಗೆ ಹೈಕೋರ್ಟ್ ನೋಟಿಸ್ ನೀಡಿದೆ.
ನ್ಯಾಯಮೂರ್ತಿ ಸುನೀಲ ದತ್ ಯಾದವ್ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಈ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ. ಇದರ ವಿಚಾರಣೆಯನ್ನ ಮುಂದಿನ ವಾರಕ್ಕೆ ಮುಂದೂಡಲಾಗಿದೆ. ಮಗನಿಗೆ ಡಿಸಿಎಂ ಅಥವ ಸಚಿವ ಪಟ್ಟ ಕಟ್ಟಬೇಕು ಎನ್ನುತ್ತಿರುವ ಬಿಎಸ್ವೈಗೆ ಮತ್ತೆ ಟೆನ್ಷನ್ ಶುರುವಾಗಿದೆ.
ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಚಾರಣೆಗೆ ಅನುಮತಿ ಬೇಕಿತ್ತು. ಇದಕ್ಕೆ ರಾಜ್ಯಪಾಲರು ನೀಡಿರ್ಲಿಲ್ಲ. ಈಗ ಯಡಿಯೂರಪ್ಪ ಮಾಜಿ ಸಿಎಂ ಆಗಿದ್ದ ಪೂರ್ವಾನುಮತಿ ಬೇಕಿಲ್ಲವೆಂದು ಅರ್ಜಿದಾರರ ವಕೀಲರು ವಾದಿಸಿದ್ರು. ಹೀಗಾಗಿ ನೋಟಿಸ್ ನೀಡಲಾಗಿದೆ.