ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಎದುರು ಮಾರ್ಚ್ 6ರಂದು ಹಾಜರಾಗುವಂತೆ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆದೇಶಿಸಿದೆ. ಮಾರ್ಚ್ 7ಕ್ಕೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ್, ಮಾರ್ಚ್ 11ಕ್ಕೆ ಸಚಿವ ಎಂ.ಬಿ ಪಾಟೀಲ, ಮಾರ್ಚ್ 15ಕ್ಕೆ ಸಚಿವ ರಾಮಲಿಂಗಾರೆಡ್ಡಿಗೆ ಹಾಜರಾಗುವಂತೆ ಆದೇಶಿಸಲಾಗಿದೆ.
2022ರಲ್ಲಿ ಅಂದಿನ ಬಿಜೆಪಿ ಸರ್ಕಾರದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ರಸ್ತೆ ತಡೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆ ಮಾಡಿದ್ದಾರೆ ಎಂದು ಅಂದಿನ ವಿಪಕ್ಷ ನಾಯಕ, ಇಂದಿನ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ದೂರು ಸಲ್ಲಿಸಿದೆ. ಇದನ್ನು ರದ್ದುಗೊಳಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದ್ರೆ, ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಮಂಗಳವಾರ ಆದೇಶ ನೀಡಲಾಗಿದೆ.