ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸರ್ಕಾರಿ ನೌಕರರ ಸಮಾನ ವೇತನಕ್ಕೆ ಆಗ್ರಹಿಸಿ ಮಾರ್ಚ್ 24ರಿಂದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ಕೊಟ್ಟಿದ್ದರು. ಆದರೆ, ಇದಕ್ಕೆ ಹೈಕೋರ್ಟ್ 3 ವಾರಗಳ ಕಾಲ ತಡೆ ನೀಡಿದೆ. ಸಾರಿಗೆ ಸಂಚಾರದಲ್ಲಿ ಸಮಸ್ಯೆಯಾಗುವ ಹಿನ್ನಲೆಯಲ್ಲಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿತ್ತು.
ಎಚ್.ಎಂ ವೆಂಕಟೇಶ್ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಸಿ.ಜೆ ಪ್ರಸನ್, ಬಿ.ವರಳೆ ಅವರಿದ್ದ ಪೀಠ, ಮೂರು ವಾರಗಳ ಕಾಲ ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಆದೇಶಿಸಿದೆ. ಮಾರ್ಚ್ 20ರಂದು ಸಾರಿಗೆ ನೌಕರರ ಸಂಘಟನೆಗಳಿಂದಿಗೆ ಕಾರ್ಮಿಕ ಇಲಾಖೆ ಆಯುಕ್ತರು ಸಭೆ ನಡೆಸಿದ್ದರು. ಅಂದು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಆಗಿಲ್ಲ. ಹೀಗಾಗಿ ಏಪ್ರಿಲ್ 6ಕ್ಕೆ ಮುಂದಿನ ಸಭೆ ನಿಗದಿಯಾಗಿದೆ.