ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಟ, ರಾಜಕಾರಣಿ ಉಪೇಂದ್ರ ವಿರುದ್ಧ ಎರಡು ಕಡೆ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ನಟ ಉಪೇಂದ್ರ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ ಎಂದಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಸಂದರ್ಭದಲ್ಲಿ ಹೇಳಿದ್ದ ಗಾದೆಮಾತು ವಿವಾದದ ಸ್ವರೂಪ ಪಡೆದುಕೊಂಡಿತು. ಹೀಗಾಗಿ ಎರಡು ಕಡೆ ಎಫ್ಐಆರ್ ದಾಖಲು, ಪ್ರತಿಭಟನೆ ಸಹ ನಡೆದವು. ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ನಟ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ತಡೆಯಾಜ್ಞೆ ನೀಡಿದೆ.