ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ

167

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆತ ಹಾಗೂ ಜೀವ ಬೆದರಿಕೆ ಇದೆ ಅನ್ನೋ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. ಹೀಗಾಗಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕರಿಗೆ ಹೆಚ್ಚಿನ ಭದ್ರತೆ ನೀಡುವುದಾಗಿ ಹೇಳಿದ್ದರು. ಅದರಂತೆ ಅವರ ನಿವಾಸಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಭದ್ರತೆ ನೀಡಿದೆ.

ಸಾರ್ವಜನಿಕರು ಅವರ ಭೇಟಿಗೆ ಬರುವುದರಿಂದ ಮೆಟೆಲ್ ಡಿಟೆಕ್ಟರ್ ಜೊತೆಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜೀವ ಬೆದರಿಕೆ ಇದೆ ಅನ್ನೋ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಿಎಂ ಚರ್ಚೆ ನಡೆಸಿ, ಹೆಚ್ಚಿನ ಭದ್ರತೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!