ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೇಂದ್ರದ ಕಾನೂನುಗಳನ್ನ ವಿರೋಧಿಸಿ ರೈತರು ನಡೆಸ್ತಿರುವ ಹೋರಾಟವನ್ನ ಹತ್ತಿಕ್ಕುವ ಸಲುವಾಗಿ ಸರ್ಕಾರ ನಡೆದುಕೊಳ್ತಿರುವ ನಡೆಯನ್ನ ಖಂಡಿಸಿ ರಾಜ್ಯಾದ್ಯಂತ ಹೆದ್ದಾರಿ ಬಂದ್ ಚಳುವಳಿ ನಡೆಸಲಾಗ್ತಿದೆ. ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಚಳುವಳಿ ರಾಜ್ಯವ್ಯಾಪಿಯಾಗಿ ನಡೆಯುತ್ತಿದೆ.
ಬೆಂಗಳೂರಿನ ಯಲಹಂಕ ಠಾಣೆ ಎದುರು ರೈತರು ಪ್ರತಿಭಟನೆ ನಡೆಸಿದ್ರು. ಇದರ ಜೊತೆಗೆ ನಗರದ ಸುತ್ತಮುತ್ತಲಿನ ಹೆದ್ದಾರಿಗಳು ತಡೆದು ಪ್ರತಿಭಟನೆ ನಡೆಸಿದ್ರು.
ಇನ್ನು ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜ ವತಿಯಿಂದ ಪ್ರತಿಭಟನೆ ನಡೆಸಲಾಯ್ತು. ತಾಲೂಕಿನ ಹಿರೇಬಾಗೇವಾಡಿ ಹತ್ತಿರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ರು. ಕರ್ನಾಟಕ ರೈತ ಸಂಘ, ಹಸಿರು ಸೇನೆ ಸೇರಿದಂತೆ ಇತರೆ ಸಂಘಟನೆಗಳ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ್ರು.
ಇದೆ ರೀತಿ ವಿಜಯಪುರದಲ್ಲಿ ಸಹ ಪ್ರತಿಭಟನೆ ನಡೆಸಲಾಯ್ತು. ವಿಜಯಪುರ-ಸಿಂದಗಿ ಬೈಪಾಸ್ ಬಳಿ ರೈತರು ಹೆದ್ದಾರಿ ತಡೆದು ಹೋರಾಟ ಮಾಡಿದ್ರು. ರೈತ ಕೃಷಿ ಕಾರ್ಮಿಕ ಸಂಘಟನೆ, ಸಿಐಟಿಯು, ಹಸಿರು ಸೇನೆ, ಕರ್ನಾಟಕ ರಾಜ್ಯ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ ಸೇರಿದಂತೆ ಇತರೆ ಸಂಘಟನಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.
ಮಂಡ್ಯ, ಹಾಸನ, ತುಮಕೂರು, ಹಾವೇರಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ರೈತರ ರಣ ಕಹಳೆ ಮೊಳಗಿದೆ. ಕೇಂದ್ರದ ನಡೆಯನ್ನ ಖಂಡಿಸಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ್ದಾರೆ.