ಹಿಂಸಾಚಾರಕ್ಕೆ ತಿರುಗಿದ ಹಿಜಾಬ್-ಕೇಸರಿ ಶಾಲು ವಿಚಾರ

282

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ದೊಡ್ಡ ಮಟ್ಟದ ಚರ್ಚೆಯ ಜೊತೆಗೆ ಹಿಂಸಾಚಾರಕ್ಕೆ ತಿರುಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕಲ್ಲು ತೂರಾಟ ನಡೆದ ಘಟನೆಗಳು ಸಂಭವಿಸಿವೆ.

ಶಿವಮೊಗ್ಗದ ಬಾಪುಜಿ ನಗರದಲ್ಲಿರುವ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಮೂಲಕ ಸಣ್ಣದೊಂದು ಘಟನೆ ಹಿಂಸೆಗೆ ದಾರಿ ಮಾಡಿದೆ.

ಇನ್ನು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿಯೂ ಗಲಾಟೆ ನಡೆದಿದೆ. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನರು, ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ ಘಟನೆ ನಡೆದಿದೆ. ಹೀಗಾಗಿ ಇಲ್ಲಿಯೂ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದೆ ರೀತಿ ಉಡುಪಿಯ ಮಹಾತ್ಮ ಗಾಂಧಿ ಮೆಮೊರಿಯಲ್ ಕಾಲೇಜು ಬಳಿ ದೊಡ್ಡ ಹೈಡ್ರಾಮಾ ನಡೆದಿದೆ. ಹಿಜಾಬ್ ಹಾಗೂ ಕೇಸರಿ ಟರ್ಬನ್ಸ್ ಸುತ್ತಿಕೊಂಡು ಬಂದ ಘಟನೆ ನಡೆದಿದೆ. ಇದರಿಂದಾಗಿ ಕಾಲೇಜು ಆಡಳಿತ ಮಂಡಳಿ ಕಾಲೇಜಿಗೆ ರಜೆ ಘೋಷಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!