ಶಾಲೆ ನಿಯಮ ಒಪ್ಪದಿದ್ದರೆ ಬೇರೆ ದಾರಿ ನೋಡಿಕೊಳ್ಳಲಿ: ನಳೀನ್ ಕುಮಾರ್ ಕಟೀಲ್

578

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಎದ್ದಿರುವ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಮಾತನಾಡಿದ್ದು, ಶಾಲೆ ಸರಸ್ವತಿ ಮಂದಿರ. ಶಾಲೆಯ ನಿಯಮಗಳನ್ನು ಅನುಸರಿಸಿಕೊಂಡು ಹೋಗುವುದು ಧರ್ಮ. ನಿಯಮಗಳಿಗೆ ಒಪ್ಪದಿದ್ದರೆ ಬೇರೆ ದಾರಿ ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.

ಟಿಪ್ಪು ಜಯಂತಿ, ಶಾದಿಭಾಗ್ಯ ಯೋಜನೆಗಳ ರೂವಾರಿ ಸಿದ್ದರಾಮಯ್ಯ ಹಿಜಾಬ್ ಬಗ್ಗೆ ಮಾತನಾಡುತ್ತಾರೆ. ಕರಾವಳಿ ತಾಲಿಬಾನ್ ಆಗಲು ಬಿಡುವುದಿಲ್ಲ. ಅವರ ಆಡಳಿದತಲ್ಲಿ ಎಷ್ಟು ಕೋಮುಗಲಭೆಗಳು ಆಗಿವೆ ಅನ್ನೋದರ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!