ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಹೈಕೋರ್ಟ್ ನಲ್ಲಿ ವಿಚಾರಣೆ ನಾಳೆಗೆ ಮುಂದೂಡಲಾಗಿದೆ. ಇದರ ನಡುವೆ ಸಿಲಿಕಾನ್ ಸಿಟಿಯಲ್ಲಿನ ಶಾಲಾ, ಕಾಲೇಜುಗಳ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.
ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಈ ಬಗ್ಗೆ ತಿಳಿಸಿದ್ದು, ಬೆಂಗಳೂರಿನಲ್ಲಿರುವ ಶಾಲಾ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಮಾರ್ಚ್ 8ರ ತನಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.