ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿಕೊಂಡೇ ಹೋಗಬೇಕೆಂದು ನಾವು ಹೇಳಿಲ್ಲ ಎಂದು ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಮೌಲಾನಾ ಮಕ್ಸೂದ್ ಇಮ್ರಾನ್ ಹೇಳಿದ್ದಾರೆ. ಹಿಜಾಬ್ ಧರಿಸಿಕೊಂಡು ಹೋದರೆ ಒಳ್ಳೆಯದು. ಹಿಜಾಬ್, ಕೇಸರಿ ಶಾಲು ಬಿಟ್ಟು ವಿದ್ಯಾರ್ಥಿಗಳು ಓದಿನ ಕಡೆ ಗಮನ ಕೊಡಬೇಕು ಎಂದರು.
ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ತರಗತಿ ಒಳಗೆ ಯಾವುದೇ ಧಾರ್ಮಿಕ ವಸ್ತ್ರ ಧರಿಸಬಾರದು. ಇನ್ನು ಹಿಜಾಬ್ ತೆಗೆಯಲು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಣೆ ನೀಡಬೇಕು. ರಸ್ತೆಯಲ್ಲಿ ನಿಲ್ಲಿಸಿ ತಗೆಸಬಾರದು ಎಂದು ಹೇಳಿದರು.