ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಶುರುವಾದ ಹಿಜಾಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಯಿತು. ಇದರ ವಿಚಾರಣೆ ಫೆಬ್ರವರಿ 10ರಂದು ಹೈಕೋರ್ಟ್ ನಡೆಸಿತು. ಹಲವು ಸುತ್ತಿನ ವಾದ ಪ್ರತಿವಾದ ಕೇಳಿದ ಹೈಕೋರ್ಟ್ ಇಂದು ತೀರ್ಪು ಅಂತ್ಯಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
ಸತತ ಎರಡು ವಾರಗಳ ಕಾಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾಯಮೂರ್ತಿ ಜೆ.ಎಂ ಖಾಜಿ ಅವರಿದ್ದ ತ್ರಿಸದಸ್ಯಪೀಠ ತೀರ್ಪು ಕಾಯ್ದಿರಿಸಿದೆ. ಅರ್ಜಿದಾರರ ಪರ ವಕೀಲರು, ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದು, ಹೈಕೋರ್ಟ್ ತೀರ್ಪಿಗಾಗಿ ಅರ್ಜಿದಾರರು ಎದುರು ನೋಡುತ್ತಿದ್ದಾರೆ.