ಸುಪ್ರೀಂ ಕೋರ್ಟಿಗೆ ಹೋಗಬಹುದು.. ಪ್ರತಿಭಟನೆ ಮಾಡಿದರೆ ಕ್ರಮ

202

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ಇದನ್ನು ಖಂಡಿಸಿ ಕೆಲವರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಳೆಹೊನ್ನೂರಿನಲ್ಲಿ ಇಂದು ಮಾತನಾಡಿದ ಅವರು, ಕೋರ್ಟ್ ಆದೇಶದ ವಿರುದ್ಧ ಪ್ರತಿಭಟನೆ ನಡೆಸುವುದು ನ್ಯಾಯಾಂಗ ನಿಂದನೆ, ಕಾನೂನು ಉಲ್ಲಂಘನೆಯಾಗುತ್ತಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಹೋಗಲು ಅವರಿಗೆ ಅವಕಾಶವಿದೆ ಎಂದರು.




Leave a Reply

Your email address will not be published. Required fields are marked *

error: Content is protected !!