ತಣ್ಣಗಾಗದ ಹಿಜಾಬ್ ಗಲಾಟೆ

301

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಜಾಬ್ ವಿಚಾರಣೆ ಹೈಕೋರ್ಟ್ ಅಂಗಳದಲ್ಲಿದೆ. ಇತ್ತ ರಾಜ್ಯದ ತುಂಬಾ ಹಿಜಾಬ್ ಗಲಾಟೆ ಮುಂದುವರೆದಿದೆ. ಹಿಜಾಬ್ ನಮ್ಮ ಹಕ್ಕು ಎಂದು ಕೆಲವು ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ. ನಿನ್ನೆಯಿಂದ ಪಿಯು, ಪದವಿ ಕಾಲೇಜುಗಳು ಪ್ರಾರಂಭವಾಗಿದ್ದು, ಹೈಸ್ಕೂಲ್ ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಗಲಾಟೆ ನಡೆದಿವೆ.

ಉಡುಪಿ, ಶಿವಮೊಗ್ಗ, ಹುಬ್ಬಳ್ಳಿ, ಮಂಡ್ಯ, ಚಿಕ್ಕಮಗಳೂರು, ಬಳ್ಳಾರಿ, ವಿಜಯಪುರ, ರಾಯಚೂರು ಸೇರಿದಂತೆ ವಿವಿಧ ಕಡೆ ಹಿಜಾಬ್ ಗಲಾಟೆ ಮುಂದುವರೆದಿದೆ. ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ. ಕೆಲವು ಕಡೆ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಶಾಲೆಗೆ ಹೋಗುತ್ತಿದ್ದಾರೆ. ಆದರೆ, ಅನೇಕ ಕಡೆ ಹಿಜಾಬ್ ಬೇಕು ಎಂದು ಹೇಳುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!