ಹಿಜಾಬ್ ಪ್ರಕರಣದ ತೀರ್ಪು: ಕ್ಲಾಸ್, ಪರೀಕ್ಷೆ ತೊರೆದ ವಿದ್ಯಾರ್ಥಿಗಳು

275

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ತೀರ್ಪು ನೀಡಿದೆ. ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲವೆಂದು ಹೇಳಿದೆ. ಇದರಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರು ಕ್ಲಾಸ್ ಹಾಗೂ ಪರೀಕ್ಷೆಯಿಂದ ಹಿಂದೆ ಸರಿದಿದ್ದಾರೆ.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಹೋಗಿದ್ದಾರೆ. ಹಾಸನ ಹಾಗೂ ಬಾಗಲಕೋಟೆಯಲ್ಲಿ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿರುವುದು ನಡೆದಿದೆ. ಹಿಜಾಬ್ ಮುಖ್ಯಾನಾ ಶಿಕ್ಷಣ ಮುಖ್ಯಾನಾ ಎಂದು ಕೇಳಿದರೆ ನಾವು ಹೇಗೆ ಹೇಳುವುದು.  ಸಮವಸ್ತ್ರದ ಜೊತೆಗೆ ನಾವು ಹಿಜಾಬ್ ಹಾಕಿಕೊಂಡು ಬರುತ್ತೇವೆ ಎಂದು ಕೆಲವು ವಿದ್ಯಾರ್ಥಿನಿಯರು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!