ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ತೀರ್ಪು ನೀಡಿದೆ. ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲವೆಂದು ಹೇಳಿದೆ. ಇದರಿಂದಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರು ಕ್ಲಾಸ್ ಹಾಗೂ ಪರೀಕ್ಷೆಯಿಂದ ಹಿಂದೆ ಸರಿದಿದ್ದಾರೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಹೋಗಿದ್ದಾರೆ. ಹಾಸನ ಹಾಗೂ ಬಾಗಲಕೋಟೆಯಲ್ಲಿ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿರುವುದು ನಡೆದಿದೆ. ಹಿಜಾಬ್ ಮುಖ್ಯಾನಾ ಶಿಕ್ಷಣ ಮುಖ್ಯಾನಾ ಎಂದು ಕೇಳಿದರೆ ನಾವು ಹೇಗೆ ಹೇಳುವುದು. ಸಮವಸ್ತ್ರದ ಜೊತೆಗೆ ನಾವು ಹಿಜಾಬ್ ಹಾಕಿಕೊಂಡು ಬರುತ್ತೇವೆ ಎಂದು ಕೆಲವು ವಿದ್ಯಾರ್ಥಿನಿಯರು ಹೇಳಿದ್ದಾರೆ.