ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಶುರುವಾಗಿದ್ದ ಹಿಜಾಬ್ ಗಲಾಟೆ ದೊಡ್ಡ ಸುದ್ದಿಯಾಯಿತು. ಹೈಕೋರ್ಟ್ ಮೆಟ್ಟಿಲು ಏರಿದೆ. ಇದರ ನಡುವೆ ನಿನ್ನೆಯಿಂದ ಶಾಲೆಯಲ್ಲಿ ಹಿಜಾಬ್ ಗಲಾಟೆ ಶುರುವಾಗಿದೆ.
ಶಿವಮೊಗ್ಗ, ಬೀದರ್, ಕಲಬುರಗಿ, ಕೊಪ್ಪಳ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಶಾಲೆಗಳಲ್ಲಿ ಹಿಜಾಬ್ ಗಲಾಟೆ ಶುರುವಾಗಿದೆ. ಪೂರಕ ಪರೀಕ್ಷೆಗಳನ್ನು ಬರೆಯದೆ ವಿದ್ಯಾರ್ಥಿನಿಯರು ವಾಪಸ್ ಹೋಗುತ್ತಿದ್ದಾರೆ. ಈ ಮೂಲಕ ಹೈಕೋರ್ಟ್ ಮೌಖಿಕ ತೀರ್ಪಿನ ಸ್ಪಷ್ಟ ಉಲ್ಲಂಘನೆ ಜೊತೆಗೆ ವಿವಾದ ಮತ್ತೊಂದು ಸ್ವರೂಪ ಪಡೆದುಕೊಳ್ಳುತ್ತಿದೆ.