ಹಿಜಾಬ್ ವಿಚಾರ: ಸಿಂದಗಿಯಲ್ಲಿ ಪ್ರತಿಭಟನೆ

292

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ವಿಚಾರಕ್ಕೆ ಸಂಬಂದಿಸಿದಂತೆ, ಸಚಿವರು, ಶಾಸಕರು, ಸಂಸದರು ನೀಡುತ್ತಿರುವ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಸಮಾನ ಮನಸ್ಕ ಮಹಿಳೆಯರು ಸಂಘಟನೆಯಿಂದ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು.

ಮಹಿಳೆಯರು, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಹಿಜಾಬ್ ವಿರೋಧಿ ನಡೆಯ ವಿರುದ್ಧ ಧಿಕ್ಕಾರ ಕೂಗಿದರು. ಸಮಾಜದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡಿ ಶಾಂತಿಗೆ ದಕ್ಕೆ ತರುವ ಹಾಗೂ ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ಮೇಲೆ ಎತ್ತಿಕಟ್ಟುತ್ತಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ತಹಶ್ಲೀದಾರ್ ನಿಂಗಣ್ಣ ಬಿರಾದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.




Leave a Reply

Your email address will not be published. Required fields are marked *

error: Content is protected !!