ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿಜಾಬ್ ವಿವಾದ ಇನ್ನು ಮುಂದುವರೆದಿದೆ. ಹೀಗಾಗಿ ಕೆಲವು ಕಡೆ ಪಿಯು ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಪರೀಕ್ಷೆಗೆ ಗೈರಾದವರಿಗೆ ಮರು ಪರೀಕ್ಷೆ ಇಲ್ಲವೆಂದು ಹೇಳಿದ್ದಾರೆ.
ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ಹಠ ಹಿಡಿದು ವರ್ಷಪೂರ್ತಿ ಓದಿದನ್ನು ಹಾಳು ಮಾಡಿಕೊಳ್ಳಬಾರದು. ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರಾದವರಿಗೆ ಮರು ಪರೀಕ್ಷೆ ಇಲ್ಲವೆಂದು ಸ್ಪಷ್ಪಡಿಸಿದ್ದಾರೆ.