ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಇಂದು ಮಧ್ಯಾಹ್ನ 2.30ಕ್ಕೆ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದೆ. ಇದರ ನಡುವೆ ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಹಿಜಾಬ್ ಗಲಾಟೆ ಮತ್ತೆ ಮುಂದುವರೆದಿದೆ.
ಶಿವಮೊಗ್ಗದ ಕರ್ನಾಟಕ ಪಬ್ಲಿಕ್ ಶಾಲೆಯ ಸುಮಾರು 13 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಸ್ ಹೋಗಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ವಾಪಸ್ ಕರೆದುಕೊಂಡಿದ್ದಾರೆ. ಇನ್ನು ಬೆಳಗಾವಿಯಲ್ಲೂ ಇದೇ ರೀತಿ ಘಟನೆ ನಡೆದಿದೆ. ಹೀಗಾಗಿ ಹಿಜಾಬ್ ವಿಚಾರ ಮತ್ತೆ ಗೊಂದಲ ಸೃಷ್ಟಿಸಿದೆ. ಕಾಲೇಜು ಬಳಿಕ ಇದೀಗ ಹೈಸ್ಕೂಲ್ ನಲ್ಲಿ ಇದರ ವಿವಾದ ನಡೆದಿದೆ.