‘ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗಲ್ಲ’

213

ಪ್ರಜಾಸ್ತ್ರ ಸುದ್ದಿ

ಉಡುಪಿ: ಹಿಜಾಬ್ ಪ್ರಕರಣದ ತೀರ್ಪನ್ನು ಇಂದು ಹೈಕೋರ್ಟ್ ನೀಡಿದೆ. ಇದಕ್ಕೆ ಅಸಮಾಧಾನ ಹೊರ ಹಾಕಿರುವ 6 ಜನ ವಿದ್ಯಾರ್ಥಿನಿಯರು, ಹಿಜಾಬ್ ಇಲ್ಲದೆ ನಾವು ಕಾಲೇಜಿಗೆ ಹೋಗಲ್ಲ ಎಂದಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದು ನಮ್ಮ ಧಾರ್ಮಿಕ ಹಕ್ಕು. ಕುರಾನ್ ಹೇಳಿದಂತೆ ನಾವು ನಡೆಯುತ್ತೇವೆ. ಹೈಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುತ್ತೆ ಅನ್ನೋ ನಂಬಿಕೆ ಇತ್ತು. ಇನ್ನು ಮುಂದೆ ನಾವು ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ.

ಹಿಜಾಬ್ ವಿಚಾರದ ಕಮ್ಯೂನಲ್ ಮಾಡಿದರು. ಇದು ಹಿಜಾಬ್ ತಡೆ ಅಲ್ಲ ನಮ್ಮ ಶಿಕ್ಷಣದ ತಡೆ ಎಂದರು. ನಾವು ಸರ್ಕಾರದ ಆದೇಶ ಅನುಸರಿಸಬೇಕಾಗಿಲ್ಲ. ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ನಮ್ಮ ವಕೀಲರ ಜೊತೆ ಚರ್ಚಿಸಿ ಮುಂದಿನ ನಡೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅಲ್ಮಾಸ್, ಆಲಿಯಾ ಅಸಾದಿ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!