ಹಿಜಾಬ್ ವಿಚಾರ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

219

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಧ್ಯಂತರ ಮೌಖಿಕ ಆದೇಶದ ವಿಚಾರಕ್ಕೆ ಸಂಬಂಧಿಸಿದಂತೆ ಹಿಜಾಬ್ ಪರ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಆದರೆ, ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಹೇಳಿದೆ.

ಕರ್ನಾಟಕದಲ್ಲಿ ಏನಾಗುತ್ತಿದೆ. ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆ ಬಗ್ಗೆಯೂ ಗಮನಿಸುತ್ತಿದ್ದೇವೆ. ಇದನ್ನು ರಾಷ್ಟ್ರೀಯ ವಿಷಯವನ್ನಾಗಿ ಮಾಡಬೇಡಿ. ಮೊದಲು ಹೈಕೋರ್ಟ್ ತೀರ್ಪು ಬರಲಿ. ಆಮೇಲೆ ನೋಡೋಣ. ಖಂಡಿತವಾಗಿಯೂ ಇದನ್ನು ಪರಿಗಣಿಸುತ್ತೇವೆ ಎಂದು ಅರ್ಜಿದಾರ ಪರ ವಕೀಲ ಕಾಮತ್ ಅವರಿಗೆ ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಾಧೀಶರು ತಿಳಿಸಿದ್ದಾರೆ.

ತೀರ್ಪು ಪ್ರಕಟವಾಗುವರೆಗೂ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಗುರುತುಗಳನ್ನು ಧರಿಸಬಾರದು ಎಂದು ಗುರುವಾರ ಹೈಕೋರ್ಟ್ ತ್ರಿಸದಸ್ಯ ಪೀಠ ಮೌಖಿಕ ಆದೇಶ ನೀಡಿದೆ. ಅಲ್ದೇ, ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಾಗುವುದು. ಶೀಘ್ರದಲ್ಲಿ ತೀರ್ಪು ನೀಡಲಾಗುವುದು ಎಂದಿದೆ.




Leave a Reply

Your email address will not be published. Required fields are marked *

error: Content is protected !!