ಪ್ರಜಾಸ್ತ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿದ ಹಿಜಾಬ್ ಧರಿಸುವ ವಿಚಾರ ಸಂಬಂಧ, ಕನ್ನಡಪರ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಕಿಡಿ ಕಾರಿದ್ದಾರೆ. ಹೊಸದಾಗಿ ಹಿಜಾಬ್ ಧರಿಸಿ ಮಕ್ಕಳು ಶಾಲಾಗೆ ಬರುತ್ತಿಲ್ಲ. ಕೇಸರಿ ಶಾಲು ಯಾವಾಗಿನಿಂದ ಬಂತು ಎಂದು ಪ್ರಶ್ನಿಸಿದ್ದಾರೆ.
ಹಿಜಾಬ್ ವಿಚಾರದಲ್ಲಿ ರಾಜಕಾರಣ ಸರಿಯಲ್ಲ. ಮಕ್ಕಳ ಹೃದಯ ಕಲಕಿ ರಾಜಕಾರಣ ಮಾಡಬಾರದು. ಇದೊಂದು ತೀಟೆ ಜಗಳ ಎಂದು ತೀವ್ರವಾಗಿ ಖಂಡಿಸಿದ್ದಾರೆ.