ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತರಗತಿಯೊಳಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಈ ಮೂಲಕ ರಾಜ್ಯದಿಂದ ಅಂತಾರಾಷ್ಟ್ರೀಯ ಮಟ್ಟದವರೆಗೂ ಬಹುದೊಡ್ಡ ಚರ್ಚೆ ನಡೆದ ವಿಷಯದ ಅರ್ಜಿಗೆ ಸುಪ್ರೀಂ ತೀರ್ಪು ಬಂದಿದೆ.
ಹಿಜಾಬ್ ವಿವಾದದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸುತ್ತೇನೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ತೀರ್ಪು ಮತ್ತೊಂದು ರೀತಿಯ ಚರ್ಚೆಗೆ ಕಾರಣವಾಗಿರುವುದು ಮಾತ್ರ ಸತ್ಯ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ, ನ್ಯಾ.ಸುಧಾಂಶು ಧುಲಿಯಾ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯಲ್ಲಿ ವಜಾಗೊಳಿಸಿದ್ದಾರೆ. ಹೈಕೋರ್ಟ್ ತೀರ್ಪು ರದ್ದುಗೊಳಿಸಿದ್ದು, ಸಿಜಿಐ ಪೀಠಕ್ಕೆ ಇದನ್ನು ವರ್ಗಾಯಿಸಲಾಗಿದೆ. ಹೀಗಾಗಿ ಕರ್ನಾಟಕ ಶಾಲಾ, ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲವೆಂದು ಹೇಳಲಾಗಿದೆ.