ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದಿಂದಲೇ ಪದೆಪದೆ ಹಿಂದಿ ಕನ್ನಡ ಹಾಗೂ ಕನ್ನಡಿಗರ ಮೇಲೆ ಹೇರಿಕೆ ಆಗುತ್ತಿರುವ ಘಟನೆಗಳು ನಡೆಯುತ್ತಿವೆ. ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್ ಸೈಟ್ ನಲ್ಲೇ ಹಿಂದಿಯನ್ನು ಬಳಸಲಾಗಿದೆ. ಕೇಂದ್ರ ಸರ್ಕಾರ 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ್ ಅನ್ನೋ ಅಭಿಯಾನ ನಡೆಸಿದೆ. ಇದನ್ನು ಕನ್ನಡದಲ್ಲಿ ಬರೆಯದೆ ಹಿಂದಿಯಲ್ಲಿರುವುದೇ ಬಳಸಿಕೊಳ್ಳಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ವಿರುದ್ಧ ಹಾಗೂ ಸಚಿವರ ವಿರುದ್ಧ, ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಇದಾದ ಮೇಲೆ ವೆಬ್ ಸೈಟ್ ನಲ್ಲಿ ಹಿಂದಿಯನ್ನು ತೆಗೆಯಲಾಗಿದೆ. ಇನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿರುದ್ಧ ಸಾರ್ವಜನಿಕರು ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.