ಪ್ರವೀಣ್ ಹತ್ಯೆ ಖಂಡಿಸಿ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ

131

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಪ್ರತಿಭಟನೆಯನ್ನು ಹಮ್ಮಿಕೊಂಡಿವೆ.

ಬಾಲಕಿಯರ ಸರ್ಕಾರಿ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿ ತನಕ ಬೃಹತ್ ಪ್ರತಿಭಟನಾ ಮೆರವಣಣಿಗೆ ನಡೆಸಲಾಗುತ್ತಿದೆ. ಭಜರಂಗದಳ, ವಿಶ್ವಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!