ಹಿರೇಕಲ್ಮಠದ ಸ್ವಾಮೀಜಿ ಲಿಂಗೈಕ್ಯ

141

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಹೊನ್ನಳ್ಳಿ ತಾಲೂಕಿನ ಹೊಟ್ಯಾಪುರ ಹಿರೇಕಲ್ಮಠದ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸೋಮವಾರ ಲಿಂಗೈಕ್ಯರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಸ್ವಾಮೀಜಿ ಬಳಲುತ್ತಿದ್ದರು. ಹೀಗಾಗಿ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೆ ಸೋಮವಾರ ನಿಧನರಾಗಿದ್ದಾರೆ. ಸಂಜೆ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!