ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಯುವಕನೊಬ್ಬ ಬಲಿಯಾಗಿದ್ದಾನೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಆರ್.ಆರ್ ನಗರದ ಮೆಟ್ರೋ ನಿಲ್ದಾಣದ ಹತ್ತಿರ ನಡೆದಿದೆ.
ಯುವಕ ಹಾಗೂ ಮೂವರು ಯುವತಿಯರು ಸೇರಿ ರಾತ್ರಿ ಜಾಲಿ ರೈಡ್ ಹೊರಟಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಇವರ ಹುಚ್ಚಾಟಕ್ಕೆ ಜೊಮ್ಯಾಟೊ ಡೆಲವರಿ ಬಾಯ್ ಆಗಿ ಜೀವನ ಮಾಡುತ್ತಿದ್ದ ಪವನ್ ಅನ್ನೋ ಯುವಕ ಬಲಿಯಾಗಿದ್ದಾನೆ. ಮೃತ ಪವನ್ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ನಿವಾಸಿ ಎಂದು ತಿಳಿದು ಬಂದಿದೆ.
ಬೈಕ್ ಡಿಕ್ಕಿ ಹೊಡೆದ ಮೇಲೆ ಕಾರು ನಿಲ್ಲಿಸಿದ ವಿನಾಯಕ್ ಎಂಬಾತ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ. ಸ್ಥಳೀಯರು ಕಾರು ಚೇಸ್ ಮಾಡಿ ಹಿಡಿದಿದ್ದಾರೆ. ಈ ವೇಳೆ ಮೂವರು ಯುವತಿಯರು ಎಸ್ಕೇಪ್ ಆಗಿದ್ದು, ವಿನಾಯಕ್ ಈಗ ಪೊಲೀಸರ ಅತಿಥಿಯಾಗಿದ್ದಾನೆ ಬ್ಯಾಟರಾಯನಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.