ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಸ್ಥಳದಲ್ಲಿ ಮೃತಪಟ್ಟು, ಮಗ ತೀವ್ರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಹತ್ತಿರ ನಡೆದಿದೆ.
ಮೃತರನ್ನು ಬೆಳಗಾವಿ ಪ್ರಭಾಕರ್ ಕೋತಾ ಎಂದು ಗುರುತಿಸಲಾಗಿದೆ. 14 ವರ್ಷದ ಮಗ ಸಮರ್ಥ್ ಗಾಯಗೊಂಡಿದ್ದಾನೆ. ಮಗನ ಶಾಲಾ ದಾಖಲಾತಿಗೆ ಬಂದಾಗ ಈ ದುರಂತ ಸಂಭವಿಸಿದೆ. ಪಡುಬಿದ್ರಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.