ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಕೋವಿಡ್ ಸೆಂಟರ್ ನಲ್ಲಿ ಹೋಮ್ ಹವನ ಮಾಡಿದ ಸಂಬಂಧ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯಗೆ ನೋಟಿಸ್ ಜಾರಿ ಮಾಡಲಾಗಿದೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕರಿ ಮಹಾಂತೇಶ ಬೀಳಗಿ ಅವರು, ಹೊನ್ನಳ್ಳಿ ತಾಲೂಕಿನ ಅರಗಬಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಹೋಮ್ ಹವನ ನಡೆಸಿದ ರೇಣುಕಾಚಾರ್ಯ ಅವರ ವಿರುದ್ಧ ನೋಟಿಸ್ ನೀಡಲು ತಹಶೀಲ್ದಾರ್ ಗೆ ತಿಳಿಸಿದ್ದೇನೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಮಾಡಲು ಅವಕಾಶವಿಲ್ಲ. ಕಾನೂನು ಎಲ್ಲರಿಗೂ ಒಂದೇ ಹೀಗಾಗಿ ನೋಟಿಸ್ ನೀಡಲು ಹೇಳಿದ್ದೇನೆ ಎಂದಿದ್ದಾರೆ.