ಪ್ರಜಾಸ್ತ್ರ ಸುದ್ದಿ
ವಿಜಯಪುರ: ರಾಜ್ಯದಲ್ಲಿ ಪ್ರಸ್ತುತವಾಗಿ ನಡೆಯುತ್ತಿರುವ ಘಟನೆಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲ ಗೃಹ ಸಚಿವರ ಅವಶ್ಯಕತೆ ಇದೆ. ಹೀಗಾಗಿ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಜಾಹೀರಾತು ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿ ಕಾರಿದರು.
ರಾಜ್ಯದಲ್ಲಿನ ಇತ್ತೀಚಿನ ಗಲಭೆಗಳ ಬಗ್ಗೆ ಗೃಹ ಸಚಿವರಿಗೆ ಸಾಫ್ಟ್ ಕಾರ್ನರ್ ಇದ್ದಂತಿದೆ. ಕಾನೂನು ಸುವ್ಯವಸ್ಥೆ ಹೆದ್ದಗೆಟ್ಟು ಹೋಗಿದೆ. ಇದರಿಂದಾಗಿ ರಾಜ್ಯಕ್ಕೆ ಬಲಿಷ್ಟ ಗೃಹ ಸಚಿವರ ಅವಶ್ಯಕತೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.