ಪ್ರಜಾಸ್ತ್ರ ಸುದ್ದಿ
ಸಿಂದಗಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆ ಆದ ಸಿಂದಗಿಯ ಅಶೋಕ ಮನಗೂಳಿ ಹಾಗೂ ದೇವರ ಹಿಪ್ಪರಗಿಯ ರಾಜುಗೌಡ ಪಾಟೀಲ ದಂಪತಿಗಳಿಗೆ, ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಸನ್ಮಾನಿಸಲಾಯಿತು.
ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಶಾಸಕರಿಗೆ ಸನ್ಮಾನಿಸಲಾಯಿತು. ಹಿಂದಿನ ಸರ್ಕಾರದಲ್ಲಿ ನೆನಗುದಿಗೆ ಬಿದ್ದ ಸಿಂದಗಿಯ ವಿದ್ಯಾರ್ಥಿ ನಿಲಯಕ್ಕೆ 1 ಕೋಟಿ ಅನುದಾನ ಬಿಡುಗಡೆಗೊಳಿಸುವ ಪ್ರಯತ್ನ ಮಾಡುವೆ. ಪಟ್ಟಣದಲ್ಲಿ ಚನ್ನಮ್ಮ ವೃತ್ತ ನಿರ್ಮಾಣ ಮಾಡಲು ಮುಸ್ಲಿಂ ಸಮಾಜದ ಸಾದಿಕ ಸುಂಬಡ ಜಾಗ ನೀಡಿದ್ದು, ಇದು ಸರ್ವ ಸಮಾಜಕ್ಕೆ ಸಾಕ್ಷಿಯಾಗಿದೆ ಎಂದು ಸಿಂದಗಿಯ ಶಾಸಕ ಅಶೋಕ ಮನಗೂಳಿ ಹೇಳಿದರು.
ದೇವರ ಹಿಪ್ಪರಗಿಯ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ನನ್ನ ಗೆಲುವಿಗೆ ಸಹಕರಿಸಿದ ಸಮಾಜದ ಬಂಧುಗಳಿಗೆ ಕೃತಜ್ಞತೆಗಳು. ನನ್ನ ಕ್ಷೇತ್ರದಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದರು. ಕಾರ್ಯಕ್ರಮದ ಸಾನಿಧ್ಯ ವಹಿಸಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಬಸವ ಜಯಮೃಂತ್ಯುಂಜಯ ಸ್ವಾಮೀಜಿ ಮಾತನಾಡಿದರು.
ಈ ವೇಳೆ ಆಸಂಗಿಹಾಳದ ಆರೂಢಮಠದ ಶಂಕರಾನಂದ ಸ್ವಾಮೀಜಿ, ಸಮಾಜದ ತಾಲೂಕಾಧ್ಯಕ್ಷ ಎಂ.ಎಂ ಹಂಗರಗಿ, ಶಿವಪ್ಪಗೌಡ ಬಿರಾದಾರ, ವಿ.ಬಿ ಕುರುಡೆ, ಜಿಲ್ಲಾಧ್ಯಕ್ಷ ಬಿ.ಎಂ ಪಾಟೀಲ, ಉಪ ನೋಂದಣಾಧಿಕಾರಿ ಎಂ.ಆರ್ ಪಾಟೀಲ, ಗುರುರಾಜ ಪಾಟೀಲ, ಸಿದ್ದನಗೌಡ ಪಾಟೀಲ, ಆನಂದ ಶಾಬಾದಿ, ಚಂದ್ರಶೇಖರ ನಾಗರಬೆಟ್ಟ, ಡಾ.ಅರವಿಂದ ಮನಗೂಳಿ, ಅಶೋಕ ಅಲ್ಲಾಪೂರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.