ಗದಗನಲ್ಲಿ ರೈತನ ಭೀಕರ ಕೊಲೆ

241

ಪ್ರಜಾಸ್ತ್ರ ಅಪರಾಧ ಸುದ್ದಿ

ಗದಗ: ಮೆಣಸಿನಕಾಯಿ ಬೆಳೆ ಕಾಯಲು ಇದ್ದ ವ್ಯಕ್ತಿಯ ಭೀಕರ ಕೊಲೆ ಮಾಡಲಾಗಿದೆ. ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. 65 ವರ್ಷದ ಹನುಮಪ್ಪ ವಜ್ರದ ಕೊಲೆಯಾದ ವ್ಯಕ್ತಿ.

ಮಾಲೀಕ ಮುಂಜಾನೆ ಹೊಲಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಕೊಲೆ ಮಾಡಿ ರುಂಡ ತೆಗೆದುಕೊಂಡು ಹೋಗಿದ್ದಾರೆ. ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೈತನ ಕೊಲೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ದುಷ್ಕರ್ಮಿಗಳ ಈ ಭೀಕರ ಕೊಲೆಯಾದ ಗ್ರಾಮದಲ್ಲಿ ಭಯದ ವಾತಾವರಣ ಮೂಡಿದೆ. ಕೊಲೆಯಾದ ಹನುಮಪ್ಪ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಾಳೆಕೊಪ್ಪ ಗ್ರಾಮದವನಾಗಿದ್ದಾನೆ.




Leave a Reply

Your email address will not be published. Required fields are marked *

error: Content is protected !!