ಪ್ರಜಾಸ್ತ್ರ ಸುದ್ದಿ
ಸಿಂದಗಿ: ಎರಡು ದಿನ ವಿಜಯಪುರ ಪ್ರವಾಸದಲ್ಲಿದ್ದ ರಾಜ್ಯ ತೋಟಗಾರಿಕಾ ಸಚಿವ ಮುನಿರತ್ನ ಅವರು, ತಾಲೂಕಿನ ಕನ್ನೊಳ್ಳಿ ಗ್ರಾಮದ ಲಿಂಬೆಯ ಸಾವಯವ ರೈತರಾದ ದಶರಥ ಸಿಂಗ್ ರಜಪೂತ ತೋಟಕ್ಕೆ ಭೇಟಿ ನೀಡಿದರು. ಈ ವೇಳೆ ರೈತರನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಪೂರ್ವದಲ್ಲಿ ವಿಜಯಪುರದ ಐತಿಹಾಸಿಕ ಗೋಲಗುಂಬಜ್ ಆವರಣದಲ್ಲಿ ಸ್ವಾಗತಿಸಲಾಯಿತು. ಬಳಿಕ ಐತಿಹಾಸಿಕ ಸ್ಥಳಗಳ ವೀಕ್ಷಣೆ ಮಾಡಿದರು.
ನಂತರ ರಾಜ್ಯ ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಶೋಕ ಅಲ್ಲಾಪೂರ ಅವರ ಮನೆಗೆ ಭೇಟಿ ನೀಡಿ ಗೌರವ ಸ್ವೀಕರಿಸಿದರು. ಈ ವೇಳೆ ಲಿಂಬೆ ಅಭಿವೃದ್ಧಿ ಮಂಡಳಿ ಕಾರ್ಯಾಲಯ ಕಟ್ಟಡ ಹಾಗೂ ಸಿಂದಗಿ ಕೋಲ್ಡ್ ಸ್ಟೋರೇಜ್ ನಿರ್ಮಿಸಲು ಸರ್ಕಾರದಿಂದ ಪ್ರಥಮ ಆದ್ಯತೆ ನೀಡುವುದಾಗಿ ತಿಳಿಸಿದರು. ಈ ವೇಳೆ ಹಾವೇರಿಯ ಗುರೂಜಿ, ಸಿ ಎಸ್ ನಾಗೂರ್, ಎಂ.ಎಸ್ ಮಠ, ರಮೇಶ ಪೂಜಾರಿ, ಸುರೇಶ ಮಳಲಿ, ಸಾಯಬಣ್ಣ ದೇವರಮನಿ, ಸಿದ್ದಣ್ಣ ಪೂಜಾರಿ, ರಾಮು ಜೋಶಿ, ಕರಿಯಪ್ಪ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.