ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಅಮೋಘಿ ಹಿರೇಕುರುಬರ ಅವರು, ಕೋವಿಡ್ ಸೋಂಕಿನಿಂದಾಗಿ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. 44 ವರ್ಷದ ಅಮೋಘಿ ಹಿರೇಕುರಬರ ಅವರು, ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ, ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಇನ್ನೊಂದು ನೋವಿನ ಸಂಗತಿ ಅಂದ್ರೆ, ಅವರ ತಾಯಿ ಅವರು ಸಹ ಕರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಒಂದೇ ದಿನ ತಾಯಿ ಹಾಗೂ ಮಗ ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದು, ಇಡೀ ಕುಟುಂಬದಲ್ಲಿ ನೀರವ ಮೌನ ಆವರಿಸಿಕೊಂಡಿದೆ.
ಅಮೋಘಿ ಹಿರೇಕುರಬರ ಅವರ ನಿಧನಕ್ಕೆ ಇಲಾಖೆ ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳು, ಅವರ ಸ್ನೇಹಿತರು, ಬಂಧು ಮಿತ್ರರು ಸಂತಾಪ ಸೂಚಿಸಿದ್ದಾರೆ.