ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ: 8 ಮಂದಿ ಸಜೀವ ದಹನ

403

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ಗುಜರಾತನ ಕೋವಿಡ್ ಆಸ್ಪತ್ರೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಇದರಿಂದಾಗಿ 8 ಮಂದಿ ಸಜೀವ ದಹನವಾದ ದುರಂತ ನಡೆದಿದೆ. ನವರಂಗಪುರದ ಶ್ರೀ ಅನ್ನೋ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಅನಾಹುತದಿಂದಾಗಿ 40ಕ್ಕೂ ಹೆಚ್ಚು ರೋಗಿಗಳನ್ನ ಬೇರೆ ಕಡೆ ಸ್ಥಳಾಂತರಿಸಲಾಗಿದೆ. ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು 8 ಮಂದಿ ಬಲಿಯಾಗಿದ್ದಾರೆ. ಇದಕ್ಕೆ ಕಾರಣ ತಿಳಿದು ಬಂದಿಲ್ಲ. ಸಿಎಂ ವಿಜಯ ರೂಪಾನಿ ತನಿಖೆಗೆ ಆದೇಶಿಸಿದ್ದು, 3 ದಿನಗಳಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಅಹಮದಾಬಾದ್ ನಲ್ಲಿ ನಡೆದ ಘಟನೆ ಬೇಸರದ ಸಂಗತಿ. ಮೃತರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ. ಪರಿಸ್ಥಿತಿ ಕುರಿತು ಸಿಎಂ ಹಾಗೂ ಮೇಯರ್ ಅವರೊಂದಿಗೆ ಮಾತ್ನಾಡಿದ್ದೇನೆ. ಸಂತ್ರಸ್ತರಿಗೆ ಎಲ್ಲ ರೀತಿಯ ಸಹಾಯ ಮಾಡಲಾಗುತ್ತೆ ಎಂದಿದ್ದಾರೆ.

https://twitter.com/narendramodi/status/1291206650930421760?s=20



Leave a Reply

Your email address will not be published. Required fields are marked *

error: Content is protected !!