ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೇ 31ಕ್ಕೆ ನಾಲ್ಕನೇ ಹಂತದ ಲಾಕ್ ಡೌನ್ ಮುಗಿಯಲಿದ್ದು, ಜೂನ್ 1ರಿಂದ ಹೋಟೆಲ್ ಪುನಾಃರಂಭಕ್ಕೆ ಅವಕಾಶ ನೀಡುವ ಮುನ್ಸೂಚನೆ ಸಿಕ್ಕಿದೆ. ಈ ಬಗ್ಗೆ ಸಿಎಂ ಅವರ ರಾಜಕೀಯ ಮುಖ್ಯಕಾರ್ಯದರ್ಶಿ ಎಸ್.ಆರ್ ವಿಶ್ವನಾಥ ಹೇಳಿದ್ದಾರೆ.
ಲಾಕ್ ಡೌನ್ ನಿಂದಾಗಿ ಹೋಟೆಲ್ ಉದ್ಯಮ ನಷ್ಟದಲ್ಲಿದೆ. ಹೀಗಾಗಿ ಮುಖ್ಯಮಂತ್ರಿಗಳನ್ನ ಎರಡು ಬಾರಿ ಭೇಟಿಯಾಗಿ ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ. ಹೀಗಾಗಿ ಲಾಕ್ ಡೌನ್ ಮುಗಿದ್ಮೇಲೆ ಷರತ್ತು ಬದ್ಧ ಅನುಮತಿ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಬಿಸಿನೀರು ಬಳಕೆ ಮಾಡುವುದು ಸೇರಿದಂತೆ ಕೆಲ ಷರತ್ತುಗಳ ಮೂಲಕ ಪುನಃರಾಂಭಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಎಸ್.ಆರ್ ವಿಶ್ವನಾಥ ತಿಳಿಸಿದ್ದಾರೆ.