ಮನೆಗೆ ಕನ್ನ ಹಾಕಿದ ಕಳ್ಳರು

152

ಪ್ರಜಾಸ್ತ್ರ ಅಪರಾಧ ಸುದ್ದಿ

ಕೊಪ್ಪಳ: ಹರಿಕೆ ತೀರಿಸಲು ಮನೆಯವರು ಧರ್ಮಸ್ಥಳಕ್ಕೆ ಹೋದಾಗ ಮನೆಗೆ ಕನ್ನ ಹಾಕಿದ ಕಳ್ಳರು, ಬರೋಬ್ಬರಿ 210 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಗಂಗಾವತಿ ನಗರದಲ್ಲಿರುವ ಶ್ರೀನಿವಾಸ್ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ.

ಮೂರು ದಿನಗಳ ಕಾಲ ಮನೆಯವರೆಲ್ಲ ಸೇರಿ ಧರ್ಮಸ್ಥಳಕ್ಕೆ ಹೋದಾಗ ಈ ಘಟನೆ ನಡೆದಿದೆ. ಮನೆಯ ಬಾಗಿಲು ಮುರಿದು ಕಳ್ಳತನ ನಡೆಸಲಾಗಿದೆ. ಇಂದು ಕುಟುಂಬಸ್ಥರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಗಂಗಾವತಿ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!