ಪ್ರಜಾಸ್ತ್ರ ಅಪರಾಧ ಸುದ್ದಿ
ದಾವಣಗೆರೆ: ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮನೆಗೆ ನುಗ್ಗಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕುಂದವಾಡ ರಸ್ತೆಯಲ್ಲಿರುವ ಲೇಕ್ ವೀವ್ ಬಡಾವಣೆಯಲ್ಲಿ ಮನೆ ದರೋಡೆ ಮಾಡಿದ ಘಟನೆ ನಡೆದಿದೆ.
ಒಬ್ಬರೆ ಮಹಿಳೆ ಇರುವುದನ್ನು ಗಮನಿಸಿ ಮನೆಗೆ ನುಗ್ಗಿದ ದರೋಡೆಕೋರ ಆಕೆ ಮೇಲೆ ಗಂಭೀರವಾಗಿ ಹಲ್ಲೆ ಮಾಡಿ 5 ಲಕ್ಷ ರೂಪಾಯಿ ದೋಚಿಕೊಂಡು ಹೋಗಿದ್ದಾನೆ. ಇದರಿಂದಾಗಿ ಈ ಭಾಗದ ಜನರಲ್ಲಿ ಆತಂಕ ಮೂಡಿದೆ. ಹಗಲು ಹೊತ್ತಿನಲ್ಲಿಯೇ ಇಷ್ಟೊಂದು ಭಯಾನಕ ಘಟನೆಗಳು ನಡೆದರೆ ಜನರು ಎಷ್ಟು ಸುರಕ್ಷಿತ ಅನ್ನೋ ಪ್ರಶ್ನೆ ಮೂಡಿದೆ.
ಶ್ರೀನಾಥ್ ಎಂಬುವರ ಮನೆಗೆ ನುಗ್ಗಿದ ಖದೀಮ, ಯೋಗೇಶ್ವರಿ ಎಂಬುವರ ಮೇಲೆ ಹಲ್ಲೆ ಮಾಡಿದ್ದಾನೆ. ಹಣ ಕೊಡಲಿಲ್ಲ ಅಂದರೆ ಮಗುವನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿ ಹಣ ದೋಚಿದ್ದಾನೆ. ಕಳ್ಳ ಮನೆಗೆ ಬಂದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯೋಗೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.