ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಗುಮ್ಮಟನಗರಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಮನೆ ದರೋಡೆ ಮಾಡಿದ ಘಟನೆ ಅಕ್ಕಿ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ. ಒಂಟಿ ಮಹಿಳೆ ಇದ್ದ ಮೂವರು ದುಷ್ಕರ್ಮಿಗಳು ನುಗ್ಗಿ ಈ ಕೃತ್ಯವೆಸಗಿದ್ದಾರೆ.
ನಿರ್ಮಲಾ ಸಪ್ಪಡ್ಲಿ ಎಂಬ ಒಂಟಿ ಮಹಿಳೆಯ ಮೇಲೆ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ, 25ಸಾವಿರ ನಗದು ಸೇರಿದಂತೆ ಇತರೆ ವಸ್ತುಗಳ ಕಳ್ಳತನವಾಗಿದೆ. ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ನಡೆದಿದೆ.