ವಾಣಿಜ್ಯನಗರಿ ಸ್ಫೋಟ ಪ್ರಕರಣಕ್ಕೆ ಇಬ್ಬರ ತಲೆದಂಡ

330

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನ ಅಮಾನತು ಮಾಡಲಾಗಿದೆ. ನಿಲ್ದಾಣದ ವ್ಯವಸ್ಥಾಪಕ ವರುಣಕುಮಾರ ದಾಸ್ ಹಾಗೂ ಆರ್ ಪಿಎಫ್ ಪೊಲೀಸ್ ಮಂಜುನಾಥ ಕಾಮತ್ ಎಂಬುವವರನ್ನು ಅಮಾನತು ಮಾಡಲಾಗಿದೆ.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಬಳಿಕ ಮಾಧ್ಯಗೋಷ್ಠಿಯಲ್ಲಿ ಮಾತ್ನಾಡಿದ ಅವರು, ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಂತಾ ಹೇಳಿದ್ರು. ಇನ್ನು ವಿಮಾನ ನಿಲ್ದಾಣಗಳಲ್ಲಿ ಇರುವಂತೆ ಇಲ್ಲಿಯೂ ಸ್ಕ್ಯಾನಿಂಗ್ ಯಂತ್ರಗಳನ್ನ ಅಳವಡಿಸಲಾಗುವುದು. ತನಿಖಾ ತಂಡವೊಂದು ಇಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಅಂತಾ ಹೇಳಿದ್ರು.

ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಸ್ಫೋಟದಲ್ಲಿ ಕೈಗೆ ತೀವ್ರ ಗಾಯ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಹುಸೇನಸಾಬ ನಾಯಕವಾಲೆಯ ಆರೋಗ್ಯ ವಿಚಾರಿಸಿದ್ರು. ಕೈಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ. ಆರೋಗ್ಯದಲ್ಲಿ ಸುಧಾರಣೆಯಿದೆ ಅಂತಾ ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!