ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಕಳೆದ 9 ದಿನಗಳಿಂದ ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಸಂಬಂಧ ಮುಷ್ಕರ ನಡೆಸ್ತಿದ್ದಾರೆ. ಸರ್ಕಾರದ ಯಾವ ಎಚ್ಚರಿಕೆಗೂ, ಕ್ರಮಕ್ಕೂ ಬಗ್ಗುತ್ತಿಲ್ಲ. ಹೀಗಾಗಿ ಮುಷ್ಕರ ಮುಂದುವರೆದಿದೆ. ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿಯ 26 ಸಿಬ್ಬಂದಿಯನ್ನ ವಜಾ ಮಾಡಲಾಗಿದೆ.
ಹುಬ್ಬಳ್ಳಿ ಗ್ರಾಮಾಂತರ ವಿಭಾಗದ 26 ತರಬೇತಿ ಸಿಬ್ಬಂದಿಯನ್ನ ವಜಾ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ಆದೇಶ ಹೊರಡಿಸಿದ್ದಾರೆ. 15 ಜನ ಡ್ರೈವರ್, 8 ಜನ ಡ್ರೈವರ್ ಕಂ ಕಂಡಕ್ಟರ್, 2 ತಾಂತ್ರಿಕ ಸಿಬ್ಬಂದಿ ಹಾಗೂ 1 ಕಿರಿಯ ಸಹಾಯಕ ಸಿಬ್ಬಂದಿಯನ್ನ ವಜಾಗೊಳಿಸಲಾಗಿದೆ.