ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಇತ್ತೀಚೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವವರ ಕುಟುಂಬಕ್ಕೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸಹಾಯ ಮಾಡುತ್ತಿದ್ದಾರೆ. ರಂಜಾನ್ ಹಬ್ಬದ ನಿಮಿತ್ತ ಮುಸ್ಲಿಂ ಕುಟುಂಬಗಳಿಗೆ ತಲಾ 5 ಸಾವಿರ ರೂಪಾಯಿ, ಫುಡ್ ಕಿಟ್ ನೀಡುತ್ತಿದ್ದಾರೆ. ಇದು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ.
ಗಲಭೆಕೋರರಿಗೆ ಸಹಾಯ ಮಾಡುವುದು ಎಷ್ಟು ಸರಿ? ಸಮಾಜಘಾತುಕರ ಪರವಾಗಿರೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಈ ಹಿಂದೆ ಪಾದಯರಾಯನಪುರ ಪುಂಡರಿಗೂ ಸಹಾಯ ಮಾಡಿದ್ದರು. ಇದೀಗ ಹುಬ್ಬಳ್ಳಿ ಪ್ರಕರಣದ ಆರೋಪಿಗಳಿಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.