ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹುಬ್ಬಳ್ಳಿ ಗಲಭೆಯ ವಿಚಾರದಲ್ಲಿ ಶಾಂತಿ ಕಾಪಾಡಲು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ಆದರೆ, ಬಿಜೆಪಿ ಈ ಎಲ್ಲ ಘಟನೆಗಳಿಗೆ ಮೂಲ ಪ್ರಚೋದನೆಯ ಕುಮ್ಮಕ್ಕಿನಿಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಕೆಲ ಕಿಡಿಗೇಡಿಗಳು ಗಲಭೆ ನಡೆಸಿದಾಗ ಪೊಲೀಸರು ನಿಯಂತ್ರಿಸಲು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ. ಆಗ ನಮ್ಮ ಜಿಲ್ಲಾಧ್ಯಕ್ಷ ಅಲ್ತಾಪ್ ಪರಿಸ್ಥಿತಿ ನಿಯಂತ್ರಿಸುವ ಸಂದರ್ಭದಲ್ಲಿ ಕಲ್ಲೇಟು ತಿಂದಿದ್ದಾರೆ. ಕೈ ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ ಎಂದರು.
ಯಡಿಯೂರಪ್ಪ ಆಗಲಿ, ಅಶೋಕ್ ಆಗಲಿ ಪರಿಸ್ಥಿತಿ ತಿಳಿಗೊಳಿಸಲು ನೋಡುತ್ತಿಲ್ಲ. ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.