ಹು-ಧಾ ಪೇ ಮೇಯರ್ ವಿಚಾರ: ಪೊಲೀಸ್ ಆಯುಕ್ತರಿಗೆ ದೂರು

217

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೇರಿದಂತೆ ಸಿಎಂ ಬೊಮ್ಮಾಯಿ ಸೇರಿ ಅನೇಕರು ಭಾಗವಹಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಪೇ ಮೇಯರ್ ಎಂದು ಪೋಸ್ಟರ್ ಹರಿಬಿಡಲಾಗಿದೆ.

ಕಾರ್ಯಕ್ರಮದಲ್ಲಿ ದುಂದುವೆಚ್ಚ ಮಾಡಿದ್ದಾರೆ ಎಂದು ಕಾಂಗ್ರೆಸ್ ನ ದೀಪಕ್ ಚಿಂಚೋರೆ, ರಜತ್ ಉಳ್ಳಾಗಡ್ಡಿಮಠ ಹಾಗೂ ಮಂಜುನಾಥನ್ ಡಟ್ಟಿ ಎಂಬುವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ರಾಜಕೀಯ ಕೆಸರೆರಚಾಟದ ಜೊತೆಗೆ ದೂರು ನೀಡುವ ಮಟ್ಟಕ್ಕೆ ಹೋಗಿದೆ.

ತಮ್ಮ ಮಾನ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು, ಜನರ ಗೌರವಕ್ಕೆ ದಕ್ಕೆ ತಂದಿದ್ದಾರೆ. ಇದರ ಹಿಂದಿನ ಉದ್ದೇಶ ಹಾಗೂ ಸಂಚು ಏನೆಂಬುದರ ಕುರಿತು ತನಿಖೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸ್ ಆಯುಕ್ತರಿಗೆ ಮೇಯರ್ ಈರೇಶ್ ಅಂಚಟಗೇರಿ ಅವರು ದೂರು ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!