ಹುಲಿಹೈದರ್ ಘಟನೆ: ಕೊಲೆ ಆರೋಪಿ ಪೊಲೀಸರಿಗೆ ಶರಣು

165

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಜಿಲ್ಲೆಯ ಹುಲಿಹೈದರ್ ಗ್ರಾಮದಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರು ಮೃತಪಟ್ಟಿದ್ದರು. ಅದರಲ್ಲಿ ಬಾಷಾವಲಿ ಅನ್ನೋ ಯುವಕನ ಕೊಲೆಗೆ ಸಂಬಂಧಿಸಿದಂತೆ ಆರೋಪಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಪಂಪಾಪತಿ ನಾಯಕ್ ಪೊಲೀಸರಿಗೆ ಶರಣಾಗಿದ್ದಾನೆ.

ಈ ಘಟನೆಯಲ್ಲಿ ಯಂಕಪ್ಪ ತಳವಾರ ಅನ್ನೋ ವ್ಯಕ್ತಿಯೊಬ್ಬ ಸಹ ಮೃತಪಟ್ಟಿದ್ದಾನೆ. ಮತ್ತೆ 7 ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಈ ಪ್ರಕರಣದ ತನಿಖೆಗೆ ಎಸ್ಪಿ ಐದು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!