ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪತಿ ಪರಸ್ತ್ರೀ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡ ಹಿನ್ನೆಲೆಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪತಿ ಹಾಗೂ ಯುವತಿಯ ಹೆಸರನ್ನು ವಾಟ್ಸಪ್ ಸ್ಟೇಟಸ್ ನಲ್ಲಿ ಹಾಕಿ ಅವರಿಗೆ ಶಿಕ್ಷೆಯಾಗಬೇಕೆಂದು ಹೇಳಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ.
ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತ ಪವಿತ್ರಾ ಮೊದಲ ಗಂಡನಿಂದ ಡಿವೋರ್ಸ್ ಪಡೆದಿದ್ದರು. ನಂತರ ಉದ್ಯಮಿ ಚೇತನಗೌಡ ಎಂಬುವವರನ್ನು 2019ರಲ್ಲಿ ಮದುವೆಯಾಗಿದ್ದರು. ಪತಿ ಚೇತನಗೌಡ, ತನ್ನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಪೂಜಾಗೌಡ ಅನ್ನೋ ಯುವತಿ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ತನಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ನನಗೆ ನ್ಯಾಯ ಸಿಗಬೇಕೆಂದು ವಾಟ್ಸಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾಳೆ.
ಮಗಳ ವಾಟ್ಸಪ್ ಸ್ಟೇಟಸ್ ನೋಡಿ ಆಕೆಯ ಕುಟುಂಬಸ್ಥರು ಮನೆಗೆ ಬರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ತಿಳಿದು ಬಂದಿದೆ. ಮೃತ ಪವಿತ್ರಾ ಕುಟುಂಬಸ್ಥರು ಪತಿ ಚೇತನಗೌಡ ಹಾಗೂ ಯುವತಿ ಪೂಜಾಗೌಡ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.