ಅನೈತಿಕ ಸಂಬಂಧ ಪ್ರಶ್ನಿಸಿದ ಹೆಂಡ್ತಿ ಹತ್ಯೆ!

292

ಪ್ರಜಾಸ್ತ್ರ ಅಪರಾಧ ಸುದ್ದಿ

ಮಂಡ್ಯ: ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ ಹೆಂಡ್ತಿಯನ್ನು ಮಕ್ಕಳ ಎದುರೆ ಪತಿಯೇ ಹತ್ಯೆ ಮಾಡಿರುವ ಘಟನೆ ಶೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಯೋಗಿತಾ ಕೊಲೆಯಾದ ದುರ್ದೈವಿ.

ಯೋಗಿತಾ ಪತಿ ರವಿ ಮಕ್ಕಳ ಎದುರೆ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ರವಿ ಪರಸ್ತ್ರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನಂತೆ. ಇದಕ್ಕಾಗಿ ಮನೆಯಲ್ಲಿ ಆಗಾಗ ಜಗಳ ನಡೆದಿದೆ. ಗ್ರಾಮಸ್ಥರು ಹಲವು ಬಾರಿ ರಾಜಿ ಪಂಚಾಯ್ತಿ ಮಾಡಿದ್ದಾರೆ. ಇದೀಗ ಮತ್ತೆ ಇಬ್ಬರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ತಾಯಿಯನ್ನು ಕಳೆದುಕೊಂಡ ಮಕ್ಕಳು, ಆಕೆ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ರವಿ ಎಸ್ಕೇಪ್ ಆಗಿದ್ದು, ಅರಕೆರೆ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!