ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಹೀಗಾಗಿ ಟಿಕೆಟ್ ಆಕಾಂಕ್ಷಿಗಳು ಭರ್ಜರಿ ಕಸರತ್ತು ನಡೆಸಿದ್ದಾರೆ. ಈಗಾಗ್ಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 100 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. ಹೀಗಾಗಿ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದ ಮುಂದೆ ಹೈಡ್ರಾಮಾ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಯೋಗೇಶ್ ಬಾಬು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರಿಗೆ ಟಿಕೆಟ್ ನೀಡಬೇಕು ಎಂದು ಬೆಂಬಲಿಗರು ಬಟ್ಟೆ ಹರಿದುಕೊಂಡು ಡೀಸೆಲ್ ಸುರಿದುಕೊಳ್ಳಲು ನೋಡಿದ ಘಟನೆ ನಡೆದಿದೆ. ಎನ್.ವೈ ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆಯಂತೆ. ಈ ಹಿನ್ನೆಲೆಯಲ್ಲಿ ಯೋಗೇಶ್ ಬಾಬು ಬೆಂಬಲಿಗರು ಗಲಾಟೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.